Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:15 - ಕನ್ನಡ ಸಮಕಾಲಿಕ ಅನುವಾದ

15 ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೆಲ್ಲಾ ಯಾಜಕರಿಗಾಗಿ ಪ್ರತ್ಯೇಕಿಸಿ ಆರತಿಯೆತ್ತಿ ಸಮರ್ಪಿಸುವ ಆ ಎದೆಯ ಭಾಗವನ್ನು, ತೊಡೆಯನ್ನು ಸರ್ವೇಶ್ವರನ ಸನ್ನಿಧಿಗೆ ತರಬೇಕು. ಸರ್ವೇಶ್ವರನ ಆಜ್ಞಾನುಸಾರ ಅವು ನಿಮಗೂ ನಿಮ್ಮ ವಂಶಜರಿಗೂ ಸಲ್ಲತಕ್ಕದ್ದು. ಇದು ಶಾಶ್ವತ ನಿಯಮ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನೂ ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನೂ ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ಪ್ರಾಣಿಗಳ ಕೊಬ್ಬನ್ನು ಅಗ್ನಿಯ ಮೂಲಕ ಹೋಮಮಾಡುವಾಗ, ಯಾಜಕರಿಗಾಗಿ ತೆಗೆದಿಟ್ಟ ತೊಡೆಯ ಭಾಗವನ್ನು ಮತ್ತು ನೈವೇದ್ಯವಾಗಿ ನಿವಾಳಿಸಬೇಕಾದ ಎದೆಯ ಭಾಗವನ್ನು ಯೆಹೋವನ ಸನ್ನಿಧಿಗೆ ತರಬೇಕು. ಅದು ನಿಮ್ಮ ಪಾಲಾಗಿರುವುದು. ಅದು ನಿನಗೂ ನಿನ್ನ ಮಕ್ಕಳಿಗೂ ಸೇರಿದ್ದು. ಯೆಹೋವನು ಆಜ್ಞಾಪಿಸಿದಂತೆ ಯಜ್ಞಗಳ ಆ ಭಾಗವು ಎಂದೆಂದೂ ನಿಮ್ಮ ಪಾಲಾಗಿರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:15
12 ತಿಳಿವುಗಳ ಹೋಲಿಕೆ  

ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”


ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.


ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


“ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.


ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು