Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:7 - ಕನ್ನಡ ಸಮಕಾಲಿಕ ಅನುವಾದ

7 ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನೀವು ದೇವದರ್ಶನಗುಡಾರದ ಬಾಗಿಲನ್ನು ಸಹ ಬಿಟ್ಟುಹೋಗಬಾರದು. ಇಲ್ಲವಾದರೆ ನೀವು ಸಾಯುವಿರಿ! ಯಾಕೆಂದರೆ, ಯೆಹೋವನ ಅಭಿಷೇಕತೈಲವು ನಿಮ್ಮ ಮೇಲಿದೆ” ಎಂದು ಹೇಳಿದನು. ಆದ್ದರಿಂದ ಆರೋನ, ಎಲ್ಲಾಜಾರ್ ಮತ್ತು ಈತಾಮಾರ್ ಮೋಶೆಯ ಮಾತಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:7
12 ತಿಳಿವುಗಳ ಹೋಲಿಕೆ  

ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.


ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,


ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.


ಅವುಗಳನ್ನು ನಿನ್ನ ಸಹೋದರ ಆರೋನನ ಮತ್ತು ಅವನ ಪುತ್ರರಿಗೆ ತೊಡಿಸಿ, ಅವರನ್ನು ಅಭಿಷೇಕಿಸಿ, ಪ್ರತಿಷ್ಠೆ ಮಾಡು. ಅವರು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವರನ್ನು ಶುದ್ಧಮಾಡು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.


ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.


“ಆರೋನನನ್ನೂ, ಅವನ ಪುತ್ರರನ್ನೂ ಅಭಿಷೇಕಿಸಿ, ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆ ಮಾಡು, ಎಂದರು.


ಯೆಹೋವ ದೇವರು ಮಾತನಾಡಿ ಆರೋನನಿಗೆ,


ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು