Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:29 - ಕನ್ನಡ ಸಮಕಾಲಿಕ ಅನುವಾದ

29 “ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ನಿಮಗೆ ಅಶುದ್ಧವಾದವುಗಳು ಯಾವುವೆಂದರೆ ಮುಂಗುಸಿ, ಇಲಿ, ಸಕಲವಿಧವಾದ ಉಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು. ಯಾವವಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:29
19 ತಿಳಿವುಗಳ ಹೋಲಿಕೆ  

ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.


ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.


ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.


“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.


“ತೋಟಗಳಲ್ಲಿ ಒಬ್ಬರ ಹಿಂದೊಬ್ಬರು ಮಧ್ಯದಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು, ಪವಿತ್ರ ಮಾಡಿಕೊಳ್ಳುವವರೂ; ಹಂದಿ ಮಾಂಸವನ್ನೂ, ಅಸಹ್ಯವಾದದ್ದನ್ನೂ, ಇಲಿಯನ್ನೂ ತಿನ್ನುವವರು ಒಟ್ಟಾಗಿ ದಹಿಸಿ ಹೋಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.


ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.


ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.


ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.


ಅರೆ ಪಳಗಿಸಿದ ಪ್ರಾಣಿ, ಹಾವುರಾಣಿ, ಊಸುರುವಳ್ಳಿ, ಹಲ್ಲಿ, ಬಸವನ ಹುಳು ಮತ್ತು ಚಿಟ್ಟಿಲಿ.


ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ ಅರಸನ ಅರಮನೆಗಳಲ್ಲಿ ಕಂಡುಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು