Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:33 - ಕನ್ನಡ ಸಮಕಾಲಿಕ ಅನುವಾದ

33 ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವದೆಲ್ಲಾ ಅಶುದ್ಧವಾಗಿರುವದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:33
11 ತಿಳಿವುಗಳ ಹೋಲಿಕೆ  

“ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.


ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು.


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಆ ಮನೆಯನ್ನು ಕೆಡವಿಹಾಕಿ, ಅದರ ಕಲ್ಲುಗಳನ್ನೂ, ಮರಗಳನ್ನೂ, ಆ ಮನೆಯ ಎಲ್ಲಾ ಧೂಳನ್ನೂ ತೆಗೆದು, ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ.


ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು.


ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.


ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.


ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು