Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಆ ಹೊಳಪಾದ ಕಲೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು, ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಹೊಳೆಯುವ ಮಚ್ಚೆಯು ತನ್ನ ಸ್ಥಳದಲ್ಲಿಯೇ ಇದ್ದು ಹರಡದಿದ್ದರೆ, ಆಗ ಅದು ಕೇವಲ ಹುಣ್ಣಿನ ಮಚ್ಚೆಯಾಗಿದೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:23
13 ತಿಳಿವುಗಳ ಹೋಲಿಕೆ  

ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.


ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.


ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು. ಅದು ಚರ್ಮರೋಗವಾಗಿದೆ.


“ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಸಹ ಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಕಲೆಯಾಗಿದ್ದರೆ,


ಆದರೆ ಯಾಜಕನು ಅದನ್ನು ಪರೀಕ್ಷಿಸಿದಾಗ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೋಟಾಗಿದ್ದರೆ, ಯಾಜಕನು ಆಗ ಅವನನ್ನು ಏಳು ದಿನಗಳ ಕಾಲ ಮುಚ್ಚಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು