Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:45 - ಕನ್ನಡ ಸಮಕಾಲಿಕ ಅನುವಾದ

45 “ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 “ಯಾರಲ್ಲಿ ಕುಷ್ಠದ ಗುರುತು ಕಾಣಿಸಿತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯನ್ನು ಕೆದರಿಕೊಂಡು, ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು ‘ನಾನು ಅಶುದ್ಧನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ‘ನಾನು ಅಶುದ್ದನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ನಾನು ಅಶುದ್ಧನು ಅಶುದ್ಧನು ಎಂದು ಕೂಗಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 “ಒಬ್ಬನಿಗೆ ಕುಷ್ಠರೋಗವಿದ್ದರೆ, ಅವನು ಬೇರೆ ಜನರಿಗೆ ಎಚ್ಚರಿಕೆ ಕೊಡಬೇಕು. ‘ನಾನು ಅಶುದ್ಧನು, ಅಶುದ್ಧನು’ ಎಂದು ಅವನು ಕೂಗಿಕೊಳ್ಳಬೇಕು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ಹರಿದುಕೊಂಡಿರಬೇಕು; ತನ್ನ ಕೂದಲನ್ನು ಕೆದರಿಕೊಂಡಿರಬೇಕು; ತನ್ನ ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:45
24 ತಿಳಿವುಗಳ ಹೋಲಿಕೆ  

ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”


ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.


ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು,


ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ.


“ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.


ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.


ನನ್ನ ಅತಿಕ್ರಮಗಳನ್ನು ನಾನೇ ತಿಳಿದಿದ್ದೇನೆ, ನನ್ನ ಪಾಪವು ಯಾವಾಗಲೂ ನನ್ನ ಕಣ್ಮುಂದೆಯೇ ಇದೆ.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,


ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.


ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.


ಅವನ ವ್ಯಾಧಿಯು ಅವನ ತಲೆಯಲ್ಲಿ ಕಾಣಿಸಿದ್ದರಿಂದ ಅವನು ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.


ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?


“ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು