Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:10 - ಕನ್ನಡ ಸಮಕಾಲಿಕ ಅನುವಾದ

10 “ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:10
26 ತಿಳಿವುಗಳ ಹೋಲಿಕೆ  

“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.


ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.


“ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ


ಯಾಜಕನು ಒಂದನೆಯ ಮೂರು ಭಾಗದಷ್ಟು ಎಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.


“ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.


ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.


ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.


ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು.


“ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.


ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.


“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.


“ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.


ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.


ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯೆಹೋವ ದೇವರ ಮುಂದೆ ನಿಲ್ಲಿಸಬೇಕು.


ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು