Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:18 - ಕನ್ನಡ ಸಮಕಾಲಿಕ ಅನುವಾದ

18 ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯಿದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:18
13 ತಿಳಿವುಗಳ ಹೋಲಿಕೆ  

ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.


ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.


ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆ ಮತ್ತು ಅವನ ಬಲಗೈಯ ಹೆಬ್ಬೆರಳಿನ ಮೇಲೆ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆ ಹಚ್ಚಬೇಕು. ಅದೇ ರೀತಿ ಪ್ರಾಯಶ್ಚಿತ್ತ ಬಲಿಯ ರಕ್ತದ ಮೇಲೆ ಹಚ್ಚಬೇಕು.


ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು