Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:22 - ಕನ್ನಡ ಸಮಕಾಲಿಕ ಅನುವಾದ

22 ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಮತ್ತೊಂದನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:22
11 ತಿಳಿವುಗಳ ಹೋಲಿಕೆ  

ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.


ಮೋವಾಬಿನಲ್ಲಿ ವಾಸವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರಿ; ಸಂದುಗಳ ಬಾಯಿಗಳ ಪಕ್ಕಗಳಲ್ಲಿ ಗೂಡು ಕಟ್ಟುವ ಪಾರಿವಾಳದ ಹಾಗಿರಿ.


ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.


ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”


ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ.


ನೀವು ಪಾಳೆಯದ ಬೆಂಕಿಯ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.”


“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


“ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ


ಯಾಜಕನು ಪ್ರಾಯಶ್ಚಿತ್ತದ ಸಮರ್ಪಣೆಯ ಆ ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.


ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು