Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:34 - ಕನ್ನಡ ಸಮಕಾಲಿಕ ಅನುವಾದ

34 “ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:34
28 ತಿಳಿವುಗಳ ಹೋಲಿಕೆ  

“ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.


ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.


ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ, ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.


“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.


ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.


ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದಲ್ಲಿ ನೀವು ಬದುಕುವ ದಿವಸಗಳಲ್ಲೆಲ್ಲಾ ಕೈಗೊಂಡು ನಡೆಯತಕ್ಕ ತೀರ್ಪು ಹಾಗು ನಿಯಮಗಳು ಇವೇ.


ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು.


“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,


ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು.


“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


ಯೆಹೋವ ದೇವರು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ:


‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”


ಬಟ್ಟೆಯ ಮತ್ತು ಮನೆಯ ಬೂಜಿಗೂ,


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು