Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಶುದ್ಧಮಾಡಿಕೊಳ್ಳುವವನಿಗೋಸ್ಕರ ಜೀವವುಳ್ಳ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳುವಂತೆ ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸಜೀವವಾದ ಎರಡು ಶುದ್ಧಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ ಶುದ್ಧ ಮಾಡಿಸಿಕೊಳ್ಳುವವನಿಗೋಸ್ಕರ ಸಜೀವವಾದ ಎರಡು ಶುದ್ಧ ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್‍ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:4
11 ತಿಳಿವುಗಳ ಹೋಲಿಕೆ  

ಯಾಜಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಹಸುವಿನ ದಹನದಲ್ಲಿ ಹಾಕಬೇಕು.


ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.


ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ಹಿಸ್ಸೋಪ ಗಿಡದ ಕಟ್ಟನ್ನು ತೆಗೆದುಕೊಂಡು, ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ, ಬಾಗಿಲಿನ ಮೇಲೆ ಅಡ್ಡ ಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವು ಕಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟುಹೋಗಬಾರದು.


ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.


ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”


“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.


“ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.


ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು