Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:7 - ಕನ್ನಡ ಸಮಕಾಲಿಕ ಅನುವಾದ

7 ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿವಿುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:7
29 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.


ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.


ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.


ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.


ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು.


ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು.


ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಮನುಷ್ಯನು ಹೋತವನ್ನು ಅಡವಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.


ಅವನು ಏಳು ಸಾರಿ ಅದರ ಮೇಲೆ ರಕ್ತವನ್ನು ಚಿಮುಕಿಸಿ, ಅದನ್ನು ಶುದ್ಧಮಾಡಬೇಕು ಮತ್ತು ಇಸ್ರಾಯೇಲರ ಅಶುದ್ಧತೆಯನ್ನು ಹೋಗಲಾಡಿಸಿ, ಅದನ್ನು ಪರಿಶುದ್ಧ ಮಾಡಬೇಕು.


ಆ ಹೋರಿಯ ರಕ್ತದಿಂದ ಸ್ವಲ್ಪ ತೆಗೆದುಕೊಂಡು, ಕರುಣಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು, ಕರುಣಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೇಕು.


ತರುವಾಯ ದೇವದಾರು ಕಟ್ಟಿಗೆಯನ್ನೂ, ಹಿಸ್ಸೋಪನ್ನೂ, ರಕ್ತವರ್ಣ ದಾರವನ್ನೂ, ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು, ಅವುಗಳನ್ನು ವಧಿಸಿದ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ, ಏಳು ಸಾರಿ ಆ ಮನೆಗೆ ಚಿಮುಕಿಸಬೇಕು.


ಆಗ ಯಾಜಕನು ಅವನನ್ನು ಪರೀಕ್ಷಿಸಿ, ಆ ವ್ಯಾಧಿಯು ಬೆಳ್ಳಗಾಗಿದ್ದರೆ, ಯಾಜಕನು, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅವನು ಶುದ್ಧನಾಗಿರುವನು.


ಆಗ ಯಾಜಕನು ಅದನ್ನು ಗಮನಿಸಬೇಕು. ತೊನ್ನು ಹತ್ತಿದರೆ, ಅವನ ಮೈಯೆಲ್ಲವನ್ನು ಹರಡಿಕೊಂಡಿದ್ದರೆ, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವುದರಿಂದ ಅವನು ಶುದ್ಧನಾಗಿರುವನು.


ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.


ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.


ಅವನು ಇದರಿಂದ ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿಕೊಂಡು ಏಳನೆಯ ದಿವಸದಲ್ಲಿ ಶುದ್ಧನಾಗಬೇಕು. ಆದರೆ ಅವನು ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧಮಾಡಿಕೊಳ್ಳದಿದ್ದರೆ, ಏಳನೆಯ ದಿವಸದಲ್ಲಿ ಶುದ್ಧನಾಗಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು