Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:5 - ಕನ್ನಡ ಸಮಕಾಲಿಕ ಅನುವಾದ

5 ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:5
31 ತಿಳಿವುಗಳ ಹೋಲಿಕೆ  

ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.


“ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.


“ಬಲಿಪಶುವಿಗಾಗಿ ಹೋತವನ್ನು ಹೋಗಲು ಬಿಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,


ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು.


ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ.


ಅವುಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ನಂತರ ಪಾಳೆಯದೊಳಕ್ಕೆ ಬರಬೇಕು.


ಯಾಜಕನು ತನ್ನ ಬಲಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು.


ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು.


ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು.


ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.


ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.


ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.


“ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು.


ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು.


ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು.


“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.


ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು