Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:10
12 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು.


ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.


ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು