Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:23 - ಕನ್ನಡ ಸಮಕಾಲಿಕ ಅನುವಾದ

23 “ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟುಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗಳನ್ನು ಅಲ್ಲಿಯೇ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟುಬಿಟ್ಟು ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದುಹಾಕುವನು. ಅವನು ಈ ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:23
8 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.


ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಮನುಷ್ಯನು ಹೋತವನ್ನು ಅಡವಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.


ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು