Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:32 - ಕನ್ನಡ ಸಮಕಾಲಿಕ ಅನುವಾದ

32 ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 [ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಆದ್ದರಿಂದ ಪ್ರಧಾನಯಾಜಕನಾಗಿ ಆರಿಸಲ್ಪಟ್ಟವನು ವಸ್ತುಗಳನ್ನು ಶುದ್ಧೀಕರಿಸಲು ಈ ಆಚರಣೆಯನ್ನು ಮಾಡಬೇಕು. ಈತನು ತನ್ನ ತಂದೆಯ ನಂತರ ಪ್ರಧಾನಯಾಜಕನಾಗಿ ಸೇವೆಮಾಡುವುದಕ್ಕೆ ನೇಮಿಸಲ್ಪಟ್ಟವನಾಗಿದ್ದಾನೆ. ಆ ಯಾಜಕನು ಪವಿತ್ರವೂ ಶ್ರೇಷ್ಠವೂ ಆಗಿರುವ ನಾರುಬಟ್ಟೆಯನ್ನು ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:32
8 ತಿಳಿವುಗಳ ಹೋಲಿಕೆ  

ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು,


ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು.


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.


ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು