Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ಆತನ ಗುಡಾರದ ಬಾಗಿಲಿಗೆ ತಾರದೆ, ಪಾಳೆಯದ ಒಳಗಾಗಲಿ ಅಥವಾ ಹೊರಗಾಗಲಿ ವಧಿಸಿದರೆ ಅವನನ್ನು ಕೊಲೆಪಾತಕನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:4
30 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.


ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.


ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.


ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.


ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.


ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ:


ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.


“ ‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು.


“ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.


ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.


“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಏಳು ದಿನಗಳವರೆಗೆ ಹುಳಿ ಹಿಟ್ಟು ನಿಮ್ಮ ಮನೆಗಳಲ್ಲಿ ಸಿಕ್ಕಬಾರದು, ಏಕೆಂದರೆ ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವರು ಪರದೇಶದವರಾಗಲಿ, ಸ್ವದೇಶದವರಾಗಲಿ ಅವರನ್ನು ಇಸ್ರಾಯೇಲ್ ಸಭೆಯೊಳಗಿಂದ ಬಹಿಷ್ಕರಿಸಬೇಕು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ,


ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.


ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು