Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:11 - ಕನ್ನಡ ಸಮಕಾಲಿಕ ಅನುವಾದ

11 “ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:11
28 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು.


ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


“ಮನುಷ್ಯರೆಲ್ಲರು ಸುಳ್ಳುಗಾರರು,” ಎಂದು ನಾನು ನಿರಾಶೆಯಿಂದ ಹೇಳಿದ್ದೆನು.


“ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು.


“ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದು ಕೊಯ್ದರೆ, ಇಲ್ಲವೆ ಅದನ್ನು ಮಾರಿದರೆ, ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ, ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.


ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.


ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.


ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು