Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:13 - ಕನ್ನಡ ಸಮಕಾಲಿಕ ಅನುವಾದ

13 “ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಿಮ್ಮ ನೆರೆಯವನಿಗೆ ಕೆಡುಕುಗಳನ್ನು ಮಾಡಬಾರದು. ನೀವು ಅವನನ್ನು ಸುಲಿಗೆ ಮಾಡಬಾರದು. ನಿಮ್ಮ ಕೂಲಿಯವರ ಕೂಲಿಯನ್ನು ಮರುದಿನದ ಮುಂಜಾನೆಯವರೆಗೆ ಹಿಡಿದಿಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:13
29 ತಿಳಿವುಗಳ ಹೋಲಿಕೆ  

ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!


ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.


‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.


ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.


ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.


“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.


ಆದರೆ ಅದರ ಯಜಮಾನನು ಅದರ ಸಂಗಡ ಇದ್ದರೆ ಈಡು ಕೊಡದೆಯಿರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಎಣಿಕೆಯಾಗಲಿ.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.


ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.


ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,


ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.


ಕಾಡುಮೃಗವು ಅದನ್ನು ಕೊಂದಿದ್ದರೆ, ಅದರ ಹೆಣವನ್ನು ಸಾಕ್ಷಿಗಾಗಿ ತರಲಿ. ಕಾಡುಮೃಗ ಕೊಂದಿದ್ದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.


“ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.


ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!” ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.


“ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು.


ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ, ಅಂಥವರ ಮಕ್ಕಳ ಕಣ್ಣುಗಳು ಮಂಕಾಗಿಬಿಡುವುದು.


ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” ಎಂದು ನಿನ್ನ ನೆರೆಯವನಿಗೆ ಹೇಳಬೇಡ.


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು.


ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು