Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:19 - ಕನ್ನಡ ಸಮಕಾಲಿಕ ಅನುವಾದ

19 “ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ಪಶುಗಳಿಗೆ ಬೇರೆ ಜಾತಿಯ ಪಶುಗಳನ್ನು ಹಾರಿಸಬಾರದು; ನಿಮ್ಮ ಹೊಲಗಳಲ್ಲಿ ವಿುಶ್ರಬೀಜಗಳನ್ನು ಬಿತ್ತಬಾರದು; ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:19
18 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು,


ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.


ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.


ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.


ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ ‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’ ” ಎಂದು ಹೇಳಿದರು.


ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ.


“ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು.


“ ‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.


ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.


ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು