Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:9 - ಕನ್ನಡ ಸಮಕಾಲಿಕ ಅನುವಾದ

9 “ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು; ಮತ್ತು ಕೊಯ್ದಾಗ ಹಕ್ಕಲಾಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಸುಗ್ಗಿಕಾಲದಲ್ಲಿ ನಿಮ್ಮ ಬೆಳೆಯನ್ನು ಕೊಯ್ಯುವಾಗ, ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬೇಡಿರಿ; ಧಾನ್ಯವೇನಾದರೂ ನೆಲದ ಮೇಲೆ ಬಿದ್ದರೆ ಅದನ್ನು ಕೂಡಿಸಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:9
9 ತಿಳಿವುಗಳ ಹೋಲಿಕೆ  

“ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವಜನು ತನ್ನ ಸೇವಕರಿಗೆ ಆಜ್ಞಾಪಿಸಿ, “ಇವಳು ಕೊಯ್ದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ಬೈಯಬೇಡಿರಿ.


ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.


ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು