Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:11 - ಕನ್ನಡ ಸಮಕಾಲಿಕ ಅನುವಾದ

11 “ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:11
19 ತಿಳಿವುಗಳ ಹೋಲಿಕೆ  

ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.


ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.


ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.


ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ; ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.


ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು