Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:14 - ಕನ್ನಡ ಸಮಕಾಲಿಕ ಅನುವಾದ

14 “ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯದ ಪ್ರಥಮಫಲವನ್ನು ಸಮರ್ಪಣೆ ಮಾಡಬೇಕಾದರೆ ಗೋದಿಯ ತಾಜವಾದ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು, ಉಮ್ಮಿಗೆಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು ಯೆಹೋವನಿಗೆ ಪ್ರಥಮಫಲ ನೈವೇದ್ಯವನ್ನು ಮಾಡಬೇಕಾದರೆ ಗೋದಿಯ ಹಸೀ ತೆನೆಗಳನ್ನು ಬೆಂಕಿಯಲ್ಲಿ ಸುಟ್ಟು ಉವ್ಮಿುಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ಪ್ರಥಮಫಲವನ್ನು ಯೆಹೋವನಿಗೆ ನೈವೇದ್ಯವಾಗಿ ಅರ್ಪಿಸುವಾಗ ಬೆಂಕಿಯಲ್ಲಿ ಸುಟ್ಟ ಗೋಧಿತೆನೆಗಳನ್ನು ತರಬೇಕು. ಅವುಗಳು ಜಜ್ಜಲ್ಪಟ್ಟ ಹಸಿ ತೆನೆಗಳಾಗಿರಬೇಕು. ಇದು ನಿಮ್ಮ ಪ್ರಥಮಫಲ ನೈವೇದ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:14
16 ತಿಳಿವುಗಳ ಹೋಲಿಕೆ  

“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’


ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.


ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.


“ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.


ಸ್ವಲ್ಪ ಕಾಲದ ತರುವಾಯ, ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು, ಯೆಹೋವ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದನು.


ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.


ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.


ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು