Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:3 - ಕನ್ನಡ ಸಮಕಾಲಿಕ ಅನುವಾದ

3 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷಗಳಲ್ಲಿ ಅತಿಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:3
17 ತಿಳಿವುಗಳ ಹೋಲಿಕೆ  

ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.


ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.


ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?


ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.


ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.


ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


“ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.


ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.


ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.


ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.


ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು