ಯಾಜಕಕಾಂಡ 20:6 - ಕನ್ನಡ ಸಮಕಾಲಿಕ ಅನುವಾದ6 “ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.