Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:9 - ಕನ್ನಡ ಸಮಕಾಲಿಕ ಅನುವಾದ

9 “ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸಿದದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯಾವನಾದರೂ ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಅವನು ತನ್ನ ತಂದೆತಾಯಿಗಳನ್ನು ಶಪಿಸಿದನು. ಅವನ ಮರಣಕ್ಕೆ ಅವನೇ ಜವಾಬ್ದಾರನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:9
17 ತಿಳಿವುಗಳ ಹೋಲಿಕೆ  

“ತಂದೆಗಾದರೂ ತಾಯಿಗಾದರೂ ಶಾಪಕೊಟ್ಟವನು ಖಂಡಿತವಾಗಿ ಸಾಯಬೇಕು.


‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಮತ್ತು ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ಮೋಶೆ ಹೇಳಿದ್ದಾನೆ.


ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.


ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.


“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.


“ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.


ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು.


“ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”


“ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.


ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು