Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:12 - ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:12
9 ತಿಳಿವುಗಳ ಹೋಲಿಕೆ  

ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.


“ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’


ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು


ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.


“ ‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು


“ ‘ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳಲ್ಲೆಲ್ಲಾ ಸತ್ತವರ ಬಳಿಗೆ ಬರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು