Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:15 - ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಲ್ಲವಾದರೆ ಅವನ ಸಂತತಿಯು ಸ್ವಜನರೊಳಗೆ ಅಪವಾದಕ್ಕೆ ಗುರಿಯಾದೀತು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:15
16 ತಿಳಿವುಗಳ ಹೋಲಿಕೆ  

ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.


ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ?


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.


ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು.


ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.


ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.


ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.


ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?


ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.


“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.


“ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು