Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:17 - ಕನ್ನಡ ಸಮಕಾಲಿಕ ಅನುವಾದ

17 “ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗಹೀನನೂ ದೇವರ ಆಹಾರವನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು; ಅಂಗಹೀನನು ಈ ಕಾರ್ಯವನ್ನು ವಹಿಸಿಕೊಳ್ಳಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:17
12 ತಿಳಿವುಗಳ ಹೋಲಿಕೆ  

ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.


ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು.


ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.


ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು