Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:16 - ಕನ್ನಡ ಸಮಕಾಲಿಕ ಅನುವಾದ

16 ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:16
15 ತಿಳಿವುಗಳ ಹೋಲಿಕೆ  

“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.


ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.


ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ.


ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.


ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?


ಇಸ್ರಾಯೇಲರು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ದೋಷವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಯೆಹೋವ ದೇವರ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.


“ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ?


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.


ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.


ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.


ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”


ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು