Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:22 - ಕನ್ನಡ ಸಮಕಾಲಿಕ ಅನುವಾದ

22 ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕುರುಡಾದದ್ದು ಕುಂಟಾದದ್ದು ಗಾಯವಾದದ್ದು ಹುಣ್ಣುಳ್ಳದ್ದು ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೂಬಾರದು, ಯಜ್ಞವೇದಿಯ ಮೇಲೆ ಹೋಮಮಾಡಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:22
9 ತಿಳಿವುಗಳ ಹೋಲಿಕೆ  

ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ.


ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.


ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,


ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.


ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು