Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:23 - ಕನ್ನಡ ಸಮಕಾಲಿಕ ಅನುವಾದ

23 ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಣೆ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಕವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:23
7 ತಿಳಿವುಗಳ ಹೋಲಿಕೆ  

ಊನಗೊಂಡ ಮನುಷ್ಯನು ಸಮೀಪಕ್ಕೆ ಬರಬಾರದು. ಎಂದರೆ, ಕಣ್ಣಿಲ್ಲದವನು, ಕುಂಟನು, ಕುರೂಪವುಳ್ಳವನು, ಅಂಗವಿಕಲನು,


ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.


ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.


ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು.


ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.


ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.


ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು