Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:10 - ಕನ್ನಡ ಸಮಕಾಲಿಕ ಅನುವಾದ

10 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ [ಜವೆಗೋದಿಯ] ಪೈರನ್ನು ಕೊಯ್ಯುವಾಗ ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. ನೀವು ಅಂಗೀಕಾರವಾಗುವಂತೆ ಅವನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:10
22 ತಿಳಿವುಗಳ ಹೋಲಿಕೆ  

“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು,” ಎಂದು ಹೇಳಿದರು.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು.


“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.


ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.


“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ,


ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.


“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.


ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ?


ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,


“ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು.


ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತಳೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶದಿಂದ ತಿರುಗಿಬಂದಳು. ಅವರು ಜವೆಗೋಧಿಯ ಸುಗ್ಗಿಯ ಕಾಲ ಪ್ರಾರಂಭವಾದಾಗ ಬೇತ್ಲೆಹೇಮಿಗೆ ತಲುಪಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು