Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂಬದಾಗಿ ಸಾರಬೇಕು. ನಾನು ನೇವಿುಸಿರುವ ಹಬ್ಬದದಿನಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:2
28 ತಿಳಿವುಗಳ ಹೋಲಿಕೆ  

“ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು.


“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.


ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.


ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


“ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ”


ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”


ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.


ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.


ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.


ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.


ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ. ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.


ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.


ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.


ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು.


ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.


ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.


ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.


“ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು