Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:28 - ಕನ್ನಡ ಸಮಕಾಲಿಕ ಅನುವಾದ

28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:28
15 ತಿಳಿವುಗಳ ಹೋಲಿಕೆ  

ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.


“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.


ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.


ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.


ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.


ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.


“ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.


ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು.


ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು