Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:3 - ಕನ್ನಡ ಸಮಕಾಲಿಕ ಅನುವಾದ

3 “ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆರು ದಿನಗಳಲ್ಲಿ ನೀವು ಕೆಲಸವನ್ನು ನಡಿಸಬೇಕು; ಏಳನೆಯ ದಿನವು ಯಾವ ಕೆಲಸವನ್ನೂ ಮಾಡಕೂಡದ ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನೂ ಮಾಡಕೂಡದು. ನಿಮ್ಮ ಎಲ್ಲಾ ನಿವಾಸಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:3
17 ತಿಳಿವುಗಳ ಹೋಲಿಕೆ  

“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.


ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.


“ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು.


ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.


“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು


ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.”


ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.


ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.


ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು