Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:34 - ಕನ್ನಡ ಸಮಕಾಲಿಕ ಅನುವಾದ

34 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:34
20 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.


ಆಗ ಅವರು ಏಳನೆಯ ತಿಂಗಳ ಹಬ್ಬದಲ್ಲಿ, ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ವಿಷಯ ನಿಯಮದಲ್ಲಿ ಬರೆದದ್ದನ್ನು ಕಂಡರು.


ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.


“ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.


“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು.


ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


ಅನಂತರ ಮೋಶೆಯು ಅವರಿಗೆ, “ಪ್ರತಿ ಏಳು ವರ್ಷ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರ್ಷದಲ್ಲಿ ಅಂದರೆ, ಗುಡಾರಗಳ ಹಬ್ಬದಲ್ಲಿ


ಯಥನಿಮ ತಿಂಗಳಲ್ಲಿ ಹಬ್ಬವಿದ್ದಾಗ, ಇಸ್ರಾಯೇಲಿನ ಸಮಸ್ತ ಜನರು ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.


ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.


“ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು