Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:40 - ಕನ್ನಡ ಸಮಕಾಲಿಕ ಅನುವಾದ

40 ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಮೊದಲನೆಯ ದಿನದಲ್ಲಿ ಶ್ರೇಷ್ಠ ವೃಕ್ಷದ ಹಣ್ಣುಗಳನ್ನೂ ಖರ್ಜೂರ ಮರದ ಗರಿಗಳನ್ನೂ ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನೂ ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನೂ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳು ಸಂಭ್ರಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣುಗಳನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:40
19 ತಿಳಿವುಗಳ ಹೋಲಿಕೆ  

ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.


ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.


ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.


ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


“ಯೆರೂಸಲೇಮಿನ ಸಂಗಡ ನೀವು ಸಂತೋಷಿಸಿರಿ. ಅವಳನ್ನು ಪ್ರೀತಿ ಮಾಡುವವರೆಲ್ಲಾ ಆಕೆಯೊಂದಿಗೆ ಉಲ್ಲಾಸಪಡಿರಿ. ಅವಳಿಗೋಸ್ಕರ ದುಃಖಿಸಿದವರೆಲ್ಲರೂ, ಆಕೆಯ ಸಂತೋಷಕ್ಕಾಗಿ ಆನಂದಪಡಿರಿ.


ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.


“ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.


ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು.


ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು