Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:7 - ಕನ್ನಡ ಸಮಕಾಲಿಕ ಅನುವಾದ

7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಂದೊಂದು ರಾಶಿಯ ಮೇಲೆ ಸ್ವಚ್ಫವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:7
17 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.


ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”


ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.


ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.


ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು