Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನಿಗೆ ಸಬ್ಬತ್ ಕಾಲವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:2
14 ತಿಳಿವುಗಳ ಹೋಲಿಕೆ  

ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


“ಆರು ವರ್ಷ ನಿಮ್ಮ ಭೂಮಿಗೆ ಬೀಜ ಹಾಕಿ, ಅದರ ಬೆಳೆಯನ್ನು ಕೂಡಿಸಬೇಕು.


ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”


ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.


“ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.


ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.


ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.


“ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,


ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.


ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.


ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಆರು ವರ್ಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು. ಆರು ವರ್ಷ ನೀವು ನಿಮ್ಮ ದ್ರಾಕ್ಷಿತೋಟವನ್ನು ಕತ್ತರಿಸಬೇಕು, ಅವುಗಳಿಂದ ಫಲವನ್ನು ಕೂಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು