Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:20 - ಕನ್ನಡ ಸಮಕಾಲಿಕ ಅನುವಾದ

20 ನೀವು, “ನಾವು ಬಿತ್ತುವುದಿಲ್ಲ, ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವುದಿಲ್ಲ. ಏಳನೆಯ ವರ್ಷದಲ್ಲಿ ನಾವು ಏನು ತಿನ್ನೋಣ,” ಎನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಆ ಏಳನೆಯ ವರ್ಷದಲ್ಲಿ ಬಿತ್ತನೆ ಮಾಡುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆಯಿರುವುದಿಲ್ಲ. ಹಾಗಾದರೆ ಆ ವರ್ಷ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ನಾನು ಹೇಳುವುದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏಳನೆಯ ವರುಷದಲ್ಲಿ ಬೀಜವನ್ನು ಬಿತ್ತುವದಕ್ಕಾಗಲಿ ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವದಕ್ಕಾಗಲಿ ಅಪ್ಪಣೆಯಿಲ್ಲವಲ್ಲಾ; ಆ ವರುಷದಲ್ಲಿ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಒಂದುವೇಳೆ ನೀವು, ‘ನಾವು ಬೀಜಗಳನ್ನು ಬಿತ್ತದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ’ ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:20
15 ತಿಳಿವುಗಳ ಹೋಲಿಕೆ  

ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.


ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.


ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ.


ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?


ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.


ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು