Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:21 - ಕನ್ನಡ ಸಮಕಾಲಿಕ ಅನುವಾದ

21 ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳ ಬೆಳೆಯಷ್ಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:21
13 ತಿಳಿವುಗಳ ಹೋಲಿಕೆ  

ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.


ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.


ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.


ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.


ಪಟ್ಟಣದಲ್ಲಿ ನಿಮಗೆ ಆಶೀರ್ವಾದ, ಹೊಲದಲ್ಲಿ ನಿಮಗೆ ಆಶೀರ್ವಾದ,


ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.


ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.


ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು.


ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,


ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.


ಆರನೆಯ ದಿವಸದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ, ಪ್ರತಿದಿನ ಕೂಡಿಸುವುದಕ್ಕಿಂತಲೂ ಎರಡರಷ್ಟಾಗಿರುವುದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು