Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:25 - ಕನ್ನಡ ಸಮಕಾಲಿಕ ಅನುವಾದ

25 “ ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಸ್ಥಿತಿಯಲ್ಲಿ ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:25
14 ತಿಳಿವುಗಳ ಹೋಲಿಕೆ  

ನೊವೊಮಿ ತನ್ನ ಸೊಸೆಗೆ, “ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ,” ಎಂದಳು. ಅನಂತರ ನೊವೊಮಿ ಅವಳಿಗೆ, “ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ,” ಎಂದಳು.


ಈಗ ನಾನು ನಿನ್ನ ವಿಮೋಚಿಸತಕ್ಕ ಸಮೀಪ ಬಂಧುವಾಗಿದ್ದೇನೆ ಎಂಬುದು ನಿಜವೇ. ಆದರೆ ನನಗಿಂತಲೂ ಸಮೀಪಸ್ಥನಾದ ಬಂಧುವು ಒಬ್ಬನಿದ್ದಾನೆ.


ಆಗ ಅವನು, “ನೀನು ಯಾರು?” ಎಂದನು. ಅದಕ್ಕವಳು, “ನಾನು ನಿಮ್ಮ ದಾಸಿಯಾದ ರೂತಳು. ನೀವು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿರಿ. ಏಕೆಂದರೆ ನೀವು ನನ್ನನ್ನು ವಿಮೋಚಿಸತಕ್ಕ ಹತ್ತಿರ ಸಂಬಂಧಿಕನು,” ಎಂದಳು.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.


ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು.


ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.


ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,


ಆಗ ಬೋವಜನು ಆ ವಿಮೋಚಕ ಬಂಧುವಿಗೆ ಹೇಳಿದ್ದೇನೆಂದರೆ, “ಮೋವಾಬ್ ಸೀಮೆಯಿಂದ ತಿರುಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿಬಿಡಬೇಕೆಂದಿರುತ್ತಾಳೆ.


“ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.


“ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು