Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:5 - ಕನ್ನಡ ಸಮಕಾಲಿಕ ಅನುವಾದ

5 ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೊಲದಲ್ಲಿ ತಾನಾಗಿ ಬೆಳೆದ ಫಸಲನ್ನು ನೀವು ಕೂಡಿಸಿಟ್ಟುಕೊಳ್ಳಬಾರದು. ತಾನಾಗಿಯೇ ಬೆಳೆದ ದ್ರಾಕ್ಷಿ ಹಣ್ಣನ್ನು ಶೇಖರಿಸಿಟ್ಟುಕೊಳ್ಳಬಾರದು. ಆ ವರ್ಷ ಪೂರ್ತಿ ಭೂಮಿಗೆ ಸಂಪೂರ್ಣ ವಿಶ್ರಾಂತಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರುಷವೆಲ್ಲಾ ಭೂವಿುಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:5
5 ತಿಳಿವುಗಳ ಹೋಲಿಕೆ  

“ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.


“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.


ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು.


ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,


ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು