Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:9 - ಕನ್ನಡ ಸಮಕಾಲಿಕ ಅನುವಾದ

9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:9
20 ತಿಳಿವುಗಳ ಹೋಲಿಕೆ  

“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


“ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.


ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.


ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.”


ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”


ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.


ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.


ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು.


“ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು.


“ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.


ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.


ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು