Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:3 - ಕನ್ನಡ ಸಮಕಾಲಿಕ ಅನುವಾದ

3 “ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಜ್ಞಾಪಕಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:3
19 ತಿಳಿವುಗಳ ಹೋಲಿಕೆ  

ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.


ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.


ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.


ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು