Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:32 - ಕನ್ನಡ ಸಮಕಾಲಿಕ ಅನುವಾದ

32 ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡುವೆನು; ಅದರಲ್ಲಿ ವಾಸವಾಗಿರುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ಒಕ್ಕಲಾಗುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿಮ್ಮ ಭೂಮಿಯನ್ನು ಬರಿದುಮಾಡುವೆ. ಅದರಲ್ಲಿ ವಾಸಿಸಲು ಬರುವ ನಿಮ್ಮ ವೈರಿಗಳೂ ಅದನ್ನು ನೋಡಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:32
28 ತಿಳಿವುಗಳ ಹೋಲಿಕೆ  

ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.


ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ಹೀಗೆ ನಾನು ಕೋಪದಿಂದಲೂ, ರೋಷದಿಂದಲೂ, ಉಗ್ರಖಂಡನೆಯಿಂದಲೂ ನಿಮ್ಮಲ್ಲಿ ನ್ಯಾಯತೀರ್ಪುಗಳನ್ನು ನಡೆಸುವಾಗ, ನಿಮ್ಮ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ, ದೂಷಣೆಯೂ, ಶಿಕ್ಷೆಯೂ, ಭಯವೂ ಆಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ.


ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.


ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.


ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.


ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.


ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.


“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.


ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.


ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.


ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.


“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು