Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:39 - ಕನ್ನಡ ಸಮಕಾಲಿಕ ಅನುವಾದ

39 ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪಿತೃಗಳ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:39
30 ತಿಳಿವುಗಳ ಹೋಲಿಕೆ  

ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಸ್ತಬ್ಧರಾಗಿ, ಒಬ್ಬರ ಸಂಗಡ ಒಬ್ಬರು ತಮ್ಮ ಪಾಪಗಳಿಗಾಗಿ ಕ್ಷಯಿಸಿ ಹೋಗುವರು.


“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’


ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.


ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.


ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


“ಆ ದಿನಗಳಲ್ಲಿ, “ ‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’


ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.


ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?


ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.


ಅವರು ಏಳದೆ ಇಲ್ಲವೆ ದೇಶವನ್ನು ವಶಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ, ಅವರ ತಂದೆಗಳ ಅಪರಾಧದ ನಿಮಿತ್ತ, ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.


ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.


‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.


ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು