Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:5 - ಕನ್ನಡ ಸಮಕಾಲಿಕ ಅನುವಾದ

5 ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕಣತುಳಿಸುವ ಕೆಲಸವು ದ್ರಾಕ್ಷಿಯನ್ನು ಸಂಗ್ರಹಿಸುವ ಸಮಯದವರೆಗೂ ಮುಂದುವರಿಯುವುದು; ದ್ರಾಕ್ಷಿಯನ್ನು ಸಂಗ್ರಹಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ಮುಂದುವರಿಯುವುದು. ಆಗ ನಿಮಗೆ ಆಹಾರವು ಸಮೃದ್ಧಿಯಾಗಿರುವುದು; ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:5
26 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.


ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.


ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.


ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”


ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.


ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು