Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:6 - ಕನ್ನಡ ಸಮಕಾಲಿಕ ಅನುವಾದ

6 “ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮ ದೇಶದಲ್ಲಿ ನಿಮಗೆ ಸಮಾಧಾನವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳನ್ನು ದೇಶದಿಂದ ತೆಗೆದುಹಾಕುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:6
43 ತಿಳಿವುಗಳ ಹೋಲಿಕೆ  

ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”


ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.


“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.


‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.


ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.


“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,


ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಅನೇಕರು ನಿನ್ನಿಂದ ಮೆಚ್ಚಿಕೆಯನ್ನು ಅಪೇಕ್ಷಿಸುವರು.


ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ


ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.


ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”


ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.


ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.


ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.


ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು.


“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?


ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.


ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.


ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.


ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.


ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.


ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.


ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.


“ ‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.


ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು.


ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು